ಒಂದು ವಾರದಲ್ಲಿ ಸರಿಪಡಿಸದಿದ್ದರೇ ಮಾಜಿ ಪ್ರಧಾನಿ ನೇತೃತ್ವದಲ್ಲಿ ಹೋರಾಟ: ಹೆಚ್.ಡಿ. ರೇವಣ್ಣ ಎಚ್ಚರಿಕೆ

ಭೂ-ಸುಧಾರಣಾ ಕಾಯಿದೆ ತಿದ್ದುಪಡಿ, ಜಿಲ್ಲೆಯ ಅಭಿವೃದ್ಧಿ ಬಗ್ಗೆ

ಒಂದು ವಾರದಲ್ಲಿ ಸರಿಪಡಿಸದಿದ್ದರೇ ಮಾಜಿ ಪ್ರಧಾನಿ ನೇತೃತ್ವದಲ್ಲಿ ಹೋರಾಟ: ಹೆಚ್.ಡಿ. ರೇವಣ್ಣ ಎಚ್ಚರಿಕೆ

ಹಾಸನ: ಭೂ-ಸುಧಾರಣಾ ಕಾಯಿದೆ ತಿದ್ದುಪಡಿ ಮತ್ತು ಇನ್ನೊಂದು ವಾರದಲ್ಲಿ ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡದಿದ್ದರೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಹೋರಾಟಕ್ಕೆ ಇಳಿಯಲಾಗುವುದು ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಎಚ್ಚರಿಸಿದರು.

​ ​ ​ ​ ​ ​ ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹೆಸರಲ್ಲಿ ಹಸಿರು ಶಾಲು ಹಾಕಿಕೊಂಡು ಮುಖ್ಯಮಂತ್ರಿಗಳು ಬೋಗಸ್ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಜನರ ಹಕ್ಕನ್ನು ಎಂದು ಕಿತ್ತುಕೊಳ್ಳಲು ಮುಂದಾಗಬೇಡಿ. ಭೂ ಸುಧಾರಣಾ ಕಾಯ್ದೆ ವಿರುದ್ದವಾಗಿ ಸಿಎಂ ವಿರುದ್ದ ಜನತೆ ದಂಗೆ ಏಳುವುದಾಗಿ ಎಚ್ಚರಿಸಿದರು. ಕರೋನಾಕ್ಕಾಗಿ ಉಪಕರಣ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪ ವಿಚಾರಕ್ಕೆ ಉತ್ತರಿಸಿದ ಅವರು, ಕಲೆಕ್ಷನ್ ಮಾಡಿಕೊಳ್ತಿದ್ದೀವಿ ಅಂತಾ ಎರಡೂ ರಾಷ್ಟ್ರೀಯ ಪಕ್ಷದವರು ಕರೋನಾ ಉಪಕರಣದ ಅವ್ಯವಹಾರದ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ವ್ಯಂಗ್ಯವಾಡಿದರು. ಡಿಕೆ. ಶಿವಕುಮಾರ್ ರವರು ಜೆಡಿಎಸ್ ಪಕ್ಷವನ್ನು ನಿರ್ಣಾಮ ಮಾಡುತ್ತಾರೆಂದು ಬಿಜೆಪಿ ಮುಖಂಡ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ರೇವಣ್ಣನವರು, ಯಾರು ಯಾರನ್ನು ನಿರ್ನಾಮ ಮಾಡುತ್ತಾರೆಂದು ಮುಂದೆ ಕಾದು ನೋಡೋಣ ಜನ ತೀರ್ಮಾನ ಮಾಡುತ್ತಾರೆ ಎಂದರು. ಜೆಡಿಎಸ್ ಪಕ್ಷವನ್ನು ನಿರ್ನಾಮ ಮಾಡೋರು ಆ ಯೋಗೇಶ್ವರ್​ ಏನು ಮಾಡ್ತಾರೆ ಎಂದು ತಿರುಗೇಟು ಹೇಳಿಕೆ ನೀಡಿದರು.

​ ​ ​ ​ ​ ಬಿಜೆಪಿಯ ಪಕ್ಷದವರು ಕರೋನಾ ನಡುವೆಯೂ ನಿಗಮ ಮಂಡಳಿ ನೇಮಕ ಮತ್ತು ಸಂಪುಟ ವಿಸ್ತರಣೆಗೆ ಮುಂದಾಗಿರುವ ವಿಚಾರವಾಗಿ ಮಾತನಾಡಿ, ಸರ್ಕಾರ ಉಳಿಸಿಕೊಂಡು ಇರುವಷ್ಟು ದಿನ ಮಜಾ ಮಾಡಬೇಕು ಅನ್ನೋದೇ ಬಿಜೆಪಿಯವರ ಉದ್ದೇಶವಾಗಿದೆ. ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಸಕಲೇಶಪುರ ತಾಲ್ಲೂಕಿನ ಹೆತ್ತೂರು ಪದವಿ ಕಾಲೇಜನ್ನು ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ. ಈ ಕಾಲೇಜಿಗೆ ಶಿಕ್ಷಕರನ್ನೇ ಇನ್ನು ನೇಮಕ ಮಾಡಿರುವುದಿಲ್ಲ. ಬೇಲೂರಿನ ರಣಘಟ್ಟ ಯೋಜನೆಗೆ ಹಣ ನೀಡದೇ ತಡೆ ಹಿಡಿದಿದ್ದಾರೆ. ಇನ್ನು ಹಾಸನ ಜಿಲ್ಲೆಯ ಎಲ್ಲಾ ಕಾಮಗಾರಿಗಳನ್ನ ತಡೆ ಹಿಡಿದಿದ್ದಾರೆ. ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನೂ ಬೇಕಂತಲೇ ತಡೆ ಹಿಡಿದಿದ್ದಾರೆ. ಮುಖ್ಯಮಂತ್ರಿಗಳು ಹಿಂದೆಯೇ ನಾನು ದ್ವೇಷದ ರಾಜಕಾರಣ ಮಾಡೊಲ್ಲಾ ಅಂತಾ ಹೇಳಿದ್ದರು. ಆದರೇ ಈಗ ಮಾಡುತ್ತಿರುವುದು ಏನು ಎಂದು ಪ್ರಶ್ನೆ ಮಾಡಿದರು.

​ ​ ​ ​ ​ ಮುಖ್ಯಮಂತ್ರಿಗಳಿಗೆ ಒಂದು ವಾರ ಗಡುವು ನೀಡುತ್ತೇವೆ. ನಮ್ಮ ಹಾಸನ ಜಿಲ್ಲೆಯ ಕೆಲಸ ಮಾಡದಿದ್ದರೇ ಸರ್ಕಾರದ ವಿರುದ್ಧ ಜೆಡಿಎಸ್ ನಿಂದ ಹೋರಾಟ ಆರಂಭಿಸಲಾಗುವುದು. ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರಿಂದ ಹೋರಾಟ ಮಾಡುವುದಾಗಿ ಮತ್ತೊಮ್ಮೆ ಎಚ್ಚರಿಕೆ ನೀಡಿದರು.

Post a Comment

0 Comments