ಅಕ್ರಮ ಮರಳು ಸಾಗಾಣಿಕೆ ವಿರುದ್ಧ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಪೊಲೀಸ್ ಠಾಣೆಗೆ ಬಂದು ಗಲಾಟೆ ಮಾಡಿರುವ ಪ್ರಕರಣ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಹಾಸನ: ಅಕ್ರಮ ಮರಳು ಸಾಗಾಣಿಕೆ ವಿರುದ್ಧ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಪೊಲೀಸ್ ಠಾಣೆಗೆ ಬಂದು ಗಲಾಟೆ ಮಾಡಿರುವ ಪ್ರಕರಣ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. 

ಹಾಸನ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಬೆಂಬಲಿಗರು ಎನ್ನಲಾದ ಬೇಲೂರು ತಾಲೂಕು ಅಧ್ಯಕ್ಷ ಅಡಗೂರು ಆನಂದ್, ರೌಡಿಶೀಟರ್ ಗಳಾದ ಮಧು ಬಿರಾಡವಳ್ಳಿ, ಭರತ್, ಮತ್ತು ಇತರ ಬೇಲೂರು ತಾಲೂಕು ಅರೇಹಳ್ಳಿ ಪೊಲೀಸ್ ಠಾಣೆಗೆ ಬಂದು ಠಾಣೆಯ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಮರಳು ಮಾಫಿಯಾ ವಿರುದ್ಧ ನಮ್ಮ ಪಕ್ಷದವರ ವಿರುದ್ಧವೇ ಪ್ರಕರಣ ಕಳಿಸುತ್ತೀರಾ ಎಂದು ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಪೊಲೀಸ್ ಠಾಣಾಧಿಕಾರಿ ವಿರುದ್ಧ ಏಕವಚನದಲ್ಲಿಯೇ ಏರುಧ್ವನಿಯಲ್ಲಿ ಮಾತನಾಡಿ ನಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪಿಎಸ್ಐ ಮುಂದೆ ಏನಾದರೂ ಪ್ರಕರಣ ದಾಖಲಿಸಿದರೆ ಇಂದಿನ ಪಿಎಸ್ಐ ಗೆ ಆಧಾರ ರೀತಿಯಲ್ಲಿಯೇ ಎತ್ತಂಗಡಿ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. 

ಏನಿದು ಪ್ರಕರಣ:

ಅರೇಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಮಧುಕುಮಾರ ಎಂಬುವವರು ವಿರುದ್ಧ ಕಳೆದ ವಾರ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದಾರೆಂಬ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದರು. ಆದರೆ ರೌಡಿ ಶೀಟರ್ ಆಗಿರುವ ಮಧು ಹಾಸನ ಜಿಲ್ಲೆಯ ಬಿಜೆಪಿಯ ಅಧ್ಯಕ್ಷ ಆಗಿರುವ ಹುಲ್ಲಹಳ್ಳಿ ಸುರೇಶ್ ಬಲಗೈ ಭಂಟ.  ಅಷ್ಟಲ್ಲದೆ ಬಿಜೆಪಿ ಕಾರ್ಯಕರ್ತ. ಹೀಗಾಗಿ ಈತನ ವಿರುದ್ಧ ಪ್ರಕರಣ ದಾಖಲು ಮಾಡಿದ್ದ ಹಿನ್ನೆಲೆಯಲ್ಲಿ ಗೊತ್ತು ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಇಪ್ಪತ್ತಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಬಂದು ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿ ಒಂದೇ ನಮ್ಮ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಮಾಡಬಾರದು ಎಂದು ಬೆದರಿಕೆ ಹಾಕಿದ್ದಾರೆ. 

ಅಷ್ಟೇ ಅಲ್ಲದೆ ಬಿಜೆಪಿ ಕಾರ್ಯಕರ್ತರನ್ನು ಠಾಣೆಗೆ ಕರೆಸಿ ರೌಡಿ ಪೆರೇಡ್ ಮಾಡಿದರೆ ಎಲ್ಲರನ್ನೂ ವರ್ಗಾವಣೆ ಮಾಡಿಸುವುದಾಗಿ ಬೆದರಿಕೆ ಹಾಕಿರುವ ಆರೋಪವೂ ಕೂಡ ಕೇಳಿಬಂದಿದೆ. ಇಷ್ಟೇ ಅಲ್ಲದೆ ರೌಡಿಶೀಟರ್ ಆಗಿರುವ ಮಧುಕುಮಾರ್ ಠಾಣೆಯಲ್ಲಿದ್ದ ಮಹಿಳಾ ಸಿಬ್ಬಂದಿ ವಾಣಿಯವರೊಂದಿಗೂ ಅನುಚಿತವಾಗಿ ವರ್ತಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾನೆ. 

ಬಳಿಕ ಬಿಜೆಪಿಯ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ನಿಮ್ಮ ಠಾಣೆಯ ಪಿಎಸ್ಐ ಯಾವ ಮಿನಿಸ್ಟರ್ ಕಡೆಯಿಂದ ಬಂದಿದ್ದಾರೆ ಎಂಬುದು ಗೊತ್ತಿದೆ ತಾನೆ?  ನಮ್ಮ ಕಾರ್ಯಕರ್ತರ ವಿರುದ್ಧ ಯಾವುದೇ ಪ್ರಕರಣಗಳು ಒಂದೇ ದಾಖಲಾದರೆ ಹಿಂದಿನ ಪಿಎಸ್ಐರನ್ನು ಎತ್ತಂಗಡಿ ಮಾಡಿಸಿದ ಹಾಗೆ ಎತ್ತಂಗಡಿ ಮಾಡಿಸುತ್ತೇವೆ ಎಂದು ಬೆದರಿಕೆ ಹೊಟ್ಟೆ ದಬ್ಬಾಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು ಈಗ ಈ ಸಂಬಂಧ ಎಲ್ಲಾ ದೃಶ್ಯಗಳು ಪೊಲೀಸ್ ಠಾಣೆಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

Post a Comment

0 Comments