ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ .

ಬೇಲೂರು:-ಪರವಾನಗಿ ಇಲ್ಲದೆ ಅಕ್ರಮವಾಗಿ  ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ .
ತಾಲ್ಲೂಕಿನ ಹಿಪ್ಪರಗಿ ಗ್ರಾಮದ ರಂಗಸ್ವಾಮಿ ಎಂಬುವರ ಜಮೀನಿನಲ್ಲಿ ಅಕ್ರಮವಾಗಿ ಮರಳು ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಂದು ಸ್ಥಳಕ್ಕೆ ದಾಳಿಮಾಡಿದ ಹಳೇಬೀಡು ಪೊಲೀಸರು ಸ್ಥಳದಲ್ಲಿದ್ದ 10 ಟ್ರ್ಯಾಕ್ಟರ್ ಗಳಷ್ಟು ಮರಳನ್ನು ವಶಪಡಿಸಿಕೊಂಡಿರುವುದಾಗಿ ಬೇಲೂರು ಠಾಣೆಯ ಪಿಎಸ್ಐ ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ .

Post a Comment

0 Comments