ಹಾಸನ: ಎರಡು ದಿನಗಳ ಹಿಂದೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರಿನ ಹೇಮಾವತಿ ಎಡದಂಡೆ ನಾಲೆ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರ ಶವ ನಾಲೆಯಲ್ಲಿ ತುಮಕೂರು ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ತಾಲ್ಲೂಕಿನ ಹಿರೀಸಾವೆ ಗ್ರಾಮದ ಸುಶ್ಮಿತ(18), ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಮೃತರು.
ಐಟಿಐ ಓದುತ್ತಿದ್ದ ರಮೇಶ್ ಹಾಗೂ ಪದವಿ ಓದುತ್ತಿದ್ದ ಸುಸ್ಮಿತಾ ಕಳೆದೊಂದು ವಷ೯ದಿಂದ ಪ್ರೀತಿಸುತ್ತಿದ್ದು,ಅಂತರ್ಜಾತಿ ಕಾರಣಕ್ಕೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ.
ನ.16 ರಂದು ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಹಾಗೂ ಇಬ್ಬರ ಚಪ್ಪಲಿ ಪತ್ತೆಯಾಗಿದ್ದು,ಸಹಜವಾಗಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಬಗೆಗೆ ಸಂಶಯ ವ್ಯಕ್ತವಾಗಿತ್ತು.
ಇದೀಗ ತುಮಕೂರು ಜಿಲ್ಲೆ ನೊಣವಿನಕೆರೆ ಠಾಣೆ ವ್ಯಾಪ್ತಿಯಲ್ಲಿ ಹೇಮಾವತಿ ಎಡದಂಡೆ ನಾಲೆಯಲ್ಲಿ ಪ್ರೇಮಿಗಳಿಬ್ಬರ ಶವ ಪತ್ತೆಯಾಗಿದ್ದು,ಪರಸ್ಪರ ಹಗ್ಗಬಿಗಿದ ನೀರಿಗೆ ಹಾರಿದ್ದಾರೆ.
ಈ ಬಗೆಗೆ ಕಳೆದ ಎರಡು ದಿನದ ಹಿಂದೆ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು.
0 Comments