ಕೇಂದ್ರದ ಗಮನ ಸೆಳೆಯುವಂತೆ ದೇವೇಗೌಡರಿಗೆ ಮನವಿ

ಸಕಲೇಶಪುರ : ವಿಳಂಬವಾಗಿ ನಡೆಯುತ್ತಿರುವ ರಾಷ್ಟಿçÃಯ ಹೆದ್ದಾರಿ-75 ಹಾಸನದಿಂದ- ಸಕಲೇಶಪುರ-ಮಾರನಹಳ್ಳಿ ಮಾರ್ಗದ ಚತುಷ್ಪಥ ರಸ್ತೆ ಕಾಮಗಾರಿ ತ್ವರಿತಗೊಳಿಸಲು ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದ ನಿವಾಸದಲ್ಲಿ
 ಹೆಚ್.ಡಿ.ದೇವೇಗೌಡರ ಯೋಗಕ್ಷೇಮ ವಿಚಾರಿಸಿದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಅವರು, ರಾಷ್ಟಿçÃಯ ಹೆದ್ದಾರಿ-75 ಚತುಷ್ಪಥ ರಸ್ತೆ ಕಾಮಗಾರಿ ವಿಳಂಬದ ಬಗ್ಗೆ ಪ್ರಸ್ತಾಪ ಮಾಡಿ, ಕಾಮಗಾರಿ 2016ರಲ್ಲಿ ಆರಂಭವಾದರೂ ಇನ್ನೂ ಶೇ.30 ರಷ್ಟು ಪ್ರಗತಿ ಕಂಡಿಲ್ಲ. ತಾವು ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಿದರು. ಈ ವೇಳೆ ಹಾಸನ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ದ್ಯಾವೇಗೌಡ ಮತ್ತಿತರರು ಹಾಜರಿದ್ದರು.

Post a Comment

0 Comments